ಶ್ರೀ ಗಣೇಶ ಹಬ್ಬದ ಪ್ರಯುಕ್ತವಾಗಿ ಸೌಹಾರ್ಧತೆ ಸಭೆ
ಗಣೇಶ ಹಬ್ಬದ ಪ್ರಯುಕ್ತವಾಗಿ ಶ್ರೀ ಗಣೇಶ ಹಬ್ಬದ ಸೌಹಾರ್ಧತೆ ಸಭೆ ಇಲ್ಲಿನ ಗ್ಲಾಸ್ ಹೌಸ್ ಬಳಿಯ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದ ಬಳಿಯಲ್ಲಿ ಇಂದು ಜರುಗಿತು.
ಹುಬ್ಬಳ್ಳಿ: ಗಣೇಶ ಹಬ್ಬದ ಪ್ರಯುಕ್ತವಾಗಿ ಶ್ರೀ ಗಣೇಶ ಹಬ್ಬದ ಸೌಹಾರ್ಧತೆ ಸಭೆ ಇಲ್ಲಿನ ಗ್ಲಾಸ್ ಹೌಸ್ ಬಳಿಯ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದ ಬಳಿಯಲ್ಲಿ ಇಂದು ಜರುಗಿತು. ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರದ ಎಲ್ಲ ಸಮೂದಾಯದ ಮುಖಂಡರು ಪಾಲ್ಗೊಂಡು ಗಣೇಶ ಹಬ್ಬವನ್ನು ಅತಿ ವಿಜೃಂಭಣೆಯಿಂದ ಜಾತ್ಯಾತೀತವಾಗಿ ಆಚರಣೆ ಮಾಡಬೇಕು. ಅಲ್ಲದೇ ಯಾವುದೇ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಶಾಂತಿ, ಸೌಹಾರ್ದತೆಯಿಂದ ಹಬ್ಬವನ್ನು ಮಾಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಪೊಲೀಸ್ ಆಯುಕ್ತ ಭೂಷಣ್ ಬೋರ್ಸೆ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಮುಖಂಡರಾದ ಅಲ್ತಾಫ್ ಹಳ್ಳೂರ, ಗುರುನಾಥ ಉಳ್ಳಿಕಾಶಿ, ಅಲ್ತಾಪ್ ಕಿತ್ತೂರ ಸೇರಿದಂತೆ ಮುಂತಾದವರು ಇದ್ದರು.
E
E Tv News Desk
Senior Staff Journalist and Correspondent at ETV 24X7. Covering breaking global stories, contemporary culture, and modern innovations.
RELATED ARTICLES
ಶ್ರೀ ಗಣೇಶ ಹಬ್ಬದ ಪ್ರಯುಕ್ತವಾಗಿ ಸೌಹಾರ್ಧತೆ ಸಭೆ
September 7, 2026